ಮಲೆಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಹುಂಡಿಗಳಲ್ಲಿ ಕಳೆದ 30 ದಿನಗಳಲ್ಲಿ ₹1,06,47,641 ಹಣ ಸೇರಿದಂತೆ 53 ಗ್ರಾಂ ಚಿನ್ನ, 650 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಸಾಲೂರು ಮಠಾಧೀಶ ಗುರುಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು.
ಹುಂಡಿಗಳನ್ನು ಗುರುಸ್ವಾಮಿಗಳ ನೇತೃತ್ವದಲ್ಲಿ ದೇವಾಲಯದಲ್ಲಿ ಪರ್ಕಾವಣೆ ಮಾಡಿ ಅಲ್ಲಿಂದ ಪೊಲೀಸರ ಸಹಕಾರದೊಂದಿಗೆ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲ್ಮಹಡಿಗೆ ಕೊಂಡೊಯ್ದು ಎಣಿಕೆ ಕಾರ್ಯ ನಡೆಸಲಾಯಿತು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಾಯತ್ರಿ, ಪ್ರಭಾರ ನಿರ್ವಾಹಕ ಅಧಿಕಾರಿ ಬಸವರಾಜು, ಸೂಪರಿಂಟೆಂಡೆಂಟ್ ಮಾದರಾಜು, ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಸೆಂದಿಲ್ನಾದನ್ ದೇವಾಲಯದ ಹಾಗೂ ಬ್ಯಾಂಕ್ ಸಿಬ್ಬಂದಿ ಇದ್ದರು.