ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಪೋಸ್ಟರ್ ಹರಿದ ಕಂಡಕ್ಟರ್ ಬಂಧನ

Last Updated 5 ಅಕ್ಟೋಬರ್ 2017, 9:41 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ರಾಜ್ಯ ಸರ್ಕಾರದ ಸಾಧನೆ ಸಾರುವ ಜಾಹೀರಾತಿನ ಪೋಸ್ಟರ್ ಹರಿದುಹಾಕಿದ ನಿರ್ವಾಹಕನನ್ನು ಬೆಟ್ಟದಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪಿರಿಯಾಪಟ್ಟಣ ಡಿಪೊದಲ್ಲಿ ನಿರ್ವಾಹಕನಾಗಿ ಕೆಲಸ ನಿರ್ವಹಿಸುತ್ತಿರುವ ಶಿವಾಜಿ ಬಂಧಿತರು. ಪಿರಿಯಾಪಟ್ಟಣ– ಬೆಟ್ಟದಪುರ ಮಾರ್ಗದ ಬಸ್ಸಿನಲ್ಲಿ ನಿರ್ವಾಹಕರಾಗಿರುವ ಅವರು, ಬಸ್ಸಿನಲ್ಲಿ ಹಾಕಿದ್ದ ರಾಜ್ಯ ಸರ್ಕಾರದ ಪೋಸ್ಟರ್ ಹರಿದು ಹಾಕುತ್ತಿದ್ದುದನ್ನು ಕಂಡು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅವರನ್ನೇ ಶಿವಾಜಿ ನಿಂದಿಸಿದ್ದಾರೆ. ಬಳಿಕ  ಕಾಂಗ್ರೆಸ್ ಮುಖಂಡರಿಗೆ ಸಾರ್ವಜನಿಕರು ವಿಷಯ ತಿಳಿಸಿದರು. ಈ ಮಾಹಿತಿ ಮೇರೆಗೆ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣೇಗೌಡ, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT