ಭಾರತೀಯ ಶಿಶುತಜ್ಞರ ಸಂಘದ ಸಾಂಕ್ರಾಮಿಕ ರೋಗಗಳ ಶಾಖೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಅಶೋಕ ರಾಯ್ ಸಮ್ಮೇಳನದ ಅಧ್ಯಕ್ಷರಾಗಿರುತ್ತಾರ. 7ರಂದು ಬೆಳಿಗ್ಗೆ 11 ಗಂಟೆಗೆ ಸಮಾವೇಶವನ್ನು ಜೆಎಸ್ಎಸ್ ವಿ.ವಿ ಕುಲಪತಿ ಬಿ.ಸುರೇಶ್ ಉದ್ಘಾಟಿಸುವರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಸಮಾವೇಶದ ಸಂಘಟನಾ ಅಧ್ಯಕ್ಷ ಡಾ.ಡಿ.ನಾರಾಯಣಪ್ಪ ಹೇಳಿದರು.