ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಪೂರೈಸಲಾಗುತ್ತಿರುವ ಆಹಾರ ಮತ್ತು ಪಾನೀಯಗಳು ಕಳಪೆ ಗುಣಮಟ್ಟದ್ದಾಗಿದೆ. ಜತೆಗೆ, ಮಾನವ ಸೇವನಗೆ ಯೋಗ್ಯವಾಗಿಲ್ಲ ಎಂದು ಇತ್ತೀಚೆಗೆ ಮಹಾಲೇಖಪಾಲರು ವರದಿ ನೀಡಿದ್ದರು. ಇದರ ಬೆನ್ನಲ್ಲೇ, ರೈಲಿನಲ್ಲಿ ಕಲುಷಿತ ಪಾನೀಯ ನೀಡಲಾಗಿದೆ ಎಂದು ರೈಲ್ವೆ ಇಲಾಖೆಯ ಮಾಜಿ ಸಚಿವ ದಿನೇಶ್ ತ್ರಿವೇದಿ ದೂರಿದ್ದರು ಎಂಬುದನ್ನೂ ವರದಿಯಲ್ಲಿ ಹೇಳಲಾಗಿದೆ
ಮುಂಬೈ ಎಲ್ಫಿನ್ಸ್ಟೋನ್ ರೈಲ್ವೆ ನಿಲ್ದಾಣ ಬಳಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತದಲ್ಲಿ 22 ಮಂದಿ ಮೃತಪಟ್ಟಿದ್ದರು. ಘಟನೆಗೆ ಮೂಲ ಸೌಕರ್ಯ ಕೊರತೆಯೂ ಕಾರಣ ಎನ್ನಲಾಗಿತ್ತು. ಈ ಮಧ್ಯೆ, ರೈಲ್ವೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸದೆ ಕೇಂದ್ರ ಸರ್ಕಾರವು ಬುಲೆಟ್ ಟ್ರೈನ್ನಂಥ ಯೋಜನೆ ಹಮ್ಮಿಕೊಂಡಿರುವುದು ಸರಿಯಲ್ಲ ಎಂಬ ಆಕ್ಷೇಪವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.