ಇದು ಮುದುಕರ ಚಿತ್ರ ಅಲ್ಲವಂತೆ. ಮೂವರು ಹುಡುಗರ ಕಥನ ಇದರಲ್ಲಿ ಇದೆಯಂತೆ. ‘ಎಲ್ಲವೂ ಇದ್ದೂ, ಏನೂ ಇಲ್ಲ ಎನ್ನುವ ಒಬ್ಬನ ತಾಕಲಾಟ, ಇರುವುದನ್ನು ಉಪಯೋಗಿಸಿಕೊಳ್ಳದೆ ಇಲ್ಲದ್ದನ್ನು ಹುಡುಕುವ ಮತ್ತೊಬ್ಬನ ಸಂಕಟ... ಇಂತಹ ಭಾವನೆಗಳನ್ನು ಹಾಸ್ಯದ ಲೇಪದ ಮೂಲಕ ಹೇಳುವ ಪ್ರಯುತ್ನ ಸಿನಿಮಾದಲ್ಲಿ ಇದೆ’ ಎಂದು ಹೇಳಿದರು ದತ್ತಣ್ಣ.