ಯರನಾಳ ವಿರಕ್ತ ಮಠದ ಸಂಗನಬಸವ ಸ್ವಾಮೀಜಿ, ಬಬಲೇಶ್ವರ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯರು, ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಕೊಲ್ಹಾರ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಮನಗೂಳಿಯ ಸಂಗನಬಸವ ಶಿವಾಚಾರ್ಯರು ಸೇರಿದಂತೆ ವಿವಿಧ ಮಠಾಧೀಶರು ಗೋ ಹತ್ಯೆ ನಿಷೇಧಿಸುವಂತೆ ಒತ್ತಾಯಿಸುವ ಲಿಖಿತ ರೂಪದ ಮನವಿಗೆ ತಮ್ಮ ಹಸ್ತಾಕ್ಷರ ಹಾಕುವ ಮೂಲಕ ಬೆಂಬಲ ಸೂಚಿಸಿದರು.