ನವದೆಹಲಿ: ಗುರುಗ್ರಾಮದ ರಾಯನ್ ಇಂಟರ್ನ್ಯಾಷನಲ್ ಶಾಲೆಯ ಏಳು ವರ್ಷದ ಬಾಲಕ ಪ್ರಧ್ಯುಮನ್ ಠಾಕೂರ್ ಅಮಾನುಷ ಹತ್ಯೆಗೆ ಶಾಲೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಸಿಬಿಎಸ್ಇ ಸುಪ್ರೀಂ ಕೋರ್ಟ್ಗೆ ಗುರುವಾರ ತಿಳಿಸಿದೆ. ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗೆ ಮೀಸಲಾದ ಶಾಲಾ ಶೌಚಾಲಯವನ್ನು ವಾಹನ ಚಾಲಕರು, ನಿರ್ವಾಹಕರಿಗೆ ಬಳಸಲು ಬಿಟ್ಟಿದ್ದೇ ಈ ಕೊಲೆಗೆ ಕಾರಣ ಎಂದು ಅಭಿಪ್ರಾಯಪಟ್ಟಿದೆ.