ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಭಾವಚಿತ್ರಕ್ಕೆ ನಾಗಾ ಸಾಧುಗಳ ಪೂಜೆ

Last Updated 5 ಅಕ್ಟೋಬರ್ 2017, 19:45 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಳಿತಿಗಾಗಿ ಕಾಂಗ್ರೆಸ್‌ ಪಕ್ಷದ ಮುಖಂಡರೊಬ್ಬರು ಉತ್ತರ ಭಾರತದ ನಾಗಾ ಸಾಧುಗಳನ್ನು ಮನೆಗೆ ಆಹ್ವಾನಿಸಿ ಪೂಜೆ ಮಾಡಿಸಿದ್ದಾರೆ.

ಕನಕಗಿರಿಯಲ್ಲಿರುವ ಕಂಸಾಳೆ ರವಿ ಎಂಬುವರ ನಿವಾಸಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದ ನಾಲ್ವರು ನಾಗಾ ಸಾಧುಗಳು ಸಿದ್ದರಾಮಯ್ಯ ಹಾಗೂ ಶಾಸಕ ವರ್ತೂರು ಪ್ರಕಾಶ್‌ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.

‘ಕೆಲ ದಿನಗಳ‌‌ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಾಗಾ ಸಾಧುಗಳೇ ಬುಧವಾರ ರಾತ್ರಿ ಇಲ್ಲಿಗೆ ಬಂದಿದ್ದರು. ಹೀಗಾಗಿ, ಅವರನ್ನು ಗುರುವಾರ ಮನೆಗೆ ಆಹ್ವಾನಿಸಿ ಪೂಜಾ ಕಾರ್ಯಕ್ರಮ ಇಟ್ಟುಕೊಂಡೆ. ಮುಖಂಡರ ಭಾವಚಿತ್ರಗಳಿಗೆ ಅವರು ಆಶೀರ್ವದಿಸಿದರು’ ಎಂದು ಕಂಸಾಳೆ ರವಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಬಳಿಕ ನಾಗಾ ಸಾಧುಗಳು ಚಾಮುಂಡಿಬೆಟ್ಟಕ್ಕೆ ತೆರಳಿದರು. ಅಲ್ಲಿಂದ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT