ಮನೆ ಮನೆಗೆ ತೆರಳಿ ಅರಿಶಿನ ಕುಂಕುಮ ನೀಡಿ, ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲು ಮತ್ತೊಮ್ಮೆ ಪಕ್ಷವನ್ನು ಆಶೀರ್ವದಿಸುವಂತೆ ಮನವಿ ಮಾಡಲಾಗುತ್ತದೆ. ನವರಾತ್ರಿ ಸಂದರ್ಭದಲ್ಲಿ ಆರಂಭಿಸಿದ ಈ ಕಾರ್ಯಕ್ರಮವನ್ನು ಈಗಾಗಲೇ 15 ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿದ್ದು, ಈ ತಿಂಗಳ ಒಳಗೆ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.