ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಮಾದರಿಯಾದ ಜಿಲ್ಲಾಧಿಕಾರಿ

Last Updated 5 ಅಕ್ಟೋಬರ್ 2017, 20:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಡೆಂಗಿ ಜ್ವರ ಪೀಡಿತ ಮಗನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಜಿಲ್ಲಾಧಿಕಾರಿ ದೀಪ್ತಿ ಕಾನಡೆ ಅವರು ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.

ಐದೂವರೆ ವರ್ಷದ ಪುತ್ರ ಅಭಿರಾಮ್‌ನಿಗೆ ಜ್ವರ ಕಾಣಿಸಿಕೊಂಡ ಕಾರಣ  ಮಂಗಳವಾರ ಜಿಲ್ಲಾ ಆಸ್ಪತ್ರೆಗೆ  ದಾಖಲಿಸಿದ್ದರು. ರಕ್ತ ಪರೀಕ್ಷೆಯಲ್ಲಿ  ಡೆಂಗಿ ಇದ್ದದ್ದು ದೃಢಪಟ್ಟ ಕಾರಣ ಗುರುವಾರ ಸಂಜೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

‘ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಡೆಂಗಿ ಇರುವುದು ದೃಢಪಟ್ಟಿದ್ದರಿಂದ ಜಿಲ್ಲಾಧಿಕಾರಿ ಕುಟುಂಬದವರು ಮಗುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರು’ ಎಂದು ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಪ್ರಕಾಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT