ಮಹಿಳೆಯರು ಕೆರೆಯ ನೀರು ತುಂಬಿದ ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ನಂತರ ಗಂಗಾಮಾತೆಗೆ ಪೂಜೆ ಸಲ್ಲಿಸಿ ಕೆರೆಗೆ ಬಾಗಿನ ಅರ್ಪಿಸಲಾಯಿತು. ಸ್ಥಳೀಯ ದರ್ಗಾದ ಮಂಜೂರ್ ಹುಸೇನ್ ಶ್ಯಾವಲಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಲ್ಮೇಶ ತೊಂಡಿಹಾಳ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ರೂಪಾ ಅಂಗಡಿ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಶಿವಮ್ಮ ಬಾದನಟ್ಟಿ ಇದ್ದರು.