ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲದ್ದಿ ಹುಳು ಬಾಧೆ: ಕೃಷಿ ಅಧಿಕಾರಿಗಳ ಭೇಟಿ

Last Updated 6 ಅಕ್ಟೋಬರ್ 2017, 6:37 IST
ಅಕ್ಷರ ಗಾತ್ರ

ಸವಣೂರ: ತಾಲ್ಲೂಕಿನ ಕಾರಡಗಿ, ಮಂತ್ರೋಡಿ, ಗುಂಡೂರ, ಚಿಲ್ಲೂರು, ಬಡ್ನಿ, ಶಿರಬಡಗಿ, ಕಡಕೋಳ ಗ್ರಾಮಗಳು ಸೇರಿದಂತೆ ಲದ್ದಿ ಹುಳ ಬಾಧೆಯಿಂದ ಹಾನಿಗೊಂಡ ಮೆಕ್ಕೆಜೋಳದ ಹೊಲಗಳಿಗೆ ಬುಧವಾರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎಸ್.ಕಟ್ಟೇಗೌಡ್ರ, ಕಲಾಲ ಮತ್ತಿತರ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲಿಸಿತು.

ಈ ವೇಳೆ ಮಾತನಾಡಿದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎಸ್.ಕಟ್ಟೇಗೌಡ್ರ, ‘ಮಳೆಯ ಪರಿಣಾಮ ಗೋವಿನಜೋಳಕ್ಕೆ ಲದ್ದಿ (ಸೈನಿಕ)ಹುಳುಗಳ ಹಾವಳಿ ಶುರುವಾಗಿದ್ದು, ಸರಿಯಾಗಿ ಉಪಚರಿಸದಿದ್ದರೆ ಬೆಳೆ ನಷ್ಟದ ಅಪಾಯ ಇದೆ. ಅದಕ್ಕಾಗಿ ಬೆಳೆಗಳಿಗೆ ಔಷಧಿ ಸಿಂಪಡಿಸಬೇಕು’ ಎಂದು ರೈತರಿಗೆ ಸಲಹೆ ನೀಡಿದರು.

‘ತಾಲ್ಲೂಕಿನಲ್ಲಿ 10,120 ಹೆಕ್ಟೇರ್ ಪ್ರದೇಶದಲ್ಲಿ ಗೋವಿನಜೋಳ ಬೆಳೆಯಲಾಗಿದೆ. ಬೆಳೆಯು ತೆನೆ ಮತ್ತು ಕಾಳು ಕಟ್ಟುವ ಹಂತದಲ್ಲಿವೆ. ಸವಣೂರ ಹಾಗೂ ಹತ್ತಿಮತ್ತೂರ ಹೋಬಳಿಗಳಲ್ಲಿ ಲದ್ದಿ ಹುಳುವಿನ ಬಾಧೆ ಕಂಡುಬಂದಿದೆ’ ಎಂದು ಅವರು ತಿಳಿಸಿದ್ದಾರೆ. ಕೀಟಗಳ ನಿಯಂತ್ರಣ ಕ್ರಮಗಳ ಬಗ್ಗೆ ರೈತರಿಗೆ ಅಧಿಕಾರಿಗಳು ತಂಡವು ಇದೇ ವೇಳೆ ವಿವರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT