ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ತೆಗೆಯಲಿ’

Last Updated 6 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ತೆಗೆಯಲಿ. ಕೇರಳಕ್ಕೆ ಬಂದು ನೊಣ ತೆಗೆಯುವ ಉಸಾಬರಿ ಅವರಿಗ್ಯಾಕೆ?’ ಎಂದು ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಬಿ. ಕೆ. ಹರಿಪ್ರಸಾದ್ ಖಾರವಾಗಿ ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಯೋಗಿ ಆದಿತ್ಯನಾಥ್ ತಮ್ಮ ರಾಜ್ಯದ ಸಮಸ್ಯೆಗಳನ್ನು ಮೊದಲು ಬಗೆಹರಿಸಲಿ. ಗೋರಖಪುರದಲ್ಲಿ ನಡೆದ ಮುಗ್ಧ ಮಕ್ಕಳ ಸಾವಿನ ಬಗ್ಗೆ ತಲೆಕೆಡಿಸಿಕೊಳ್ಳಲು ಅವರಿಗೆ ಪುರುಸೋತ್ತಿಲ್ಲ’ ಎಂದು ಟೀಕಿಸಿದರು.

‘ಅಮಿತ್ ಷಾ ಗುಜರಾತ್‌ ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡ್ಕೊಂಡವರು. ಷಾ ಅವರನ್ನು ಸುಪ್ರೀಂ ಕೋರ್ಟ್ ಗುಜರಾತಿನಿಂದ ಎರಡು ವರ್ಷ ಗಡಿಪಾರು ಮಾಡಿತ್ತು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT