ಶುಕ್ರವಾರ ಸಂಜೆ ಸ್ಥಳಕ್ಕೆ ಬಂದ ಸಚಿವ ಖಾದರ್ ಅವರನ್ನು ದೂಡಿಕೊಂಡೇ ಹಿಂದಕ್ಕೆ ಕಳುಹಿಸಿದ ಗುಂಪು, ಕಲ್ಲು ತೂರಾಟ ನಡೆಸಿತು.
ಜುಬೈರ್ ಹತ್ಯೆಗೆ ಸಚಿವ ಖಾದರ್ ಪರೋಕ್ಷ ಕಾರಣವೆಂದು ಆರೋಪಿಸಿದ ಮುಕ್ಕಚ್ಚೇರಿ ನಿವಾಸಿಗಳು, ಜುಬೈರ್ ದಫನ ಸಂದರ್ಭವೂ ಸಚಿವರು ಬಾರದೇ ಇರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶುಕ್ರವಾರ ಸಂಜೆ ಡಿವೈಎಫ್ಐ ನೇತೃತ್ವದಲ್ಲಿ ಮುಕ್ಕಚ್ಚೇರಿ ಮಸೀದಿ ಎದುರು, ಜುಬೈರ್ ಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ, ನೂರಕ್ಕೂ ಅಧಿಕ ಸ್ಥಳೀಯರು ಜಮಾಯಿಸಿದ್ದರು.