‘ಬೆಂಗಳೂರು ನಗರದ ಸಮಸ್ಯೆಗಳನ್ನು ಎತ್ತಿ ಹಿಡಿದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕೆಲವು ಸಚಿವರುಗಳ ಮೇಲೆ ಮಾಡಿದ್ದ ಆರೋಪಗಳು ನನ್ನ ಗಮನಕ್ಕೂ ಬಂದಿವೆ. ಈ ಆರೋಪಗಳಿಗೆ ಸ್ಪಷ್ಟೀಕರಣ ನೀಡಿ, ತಿರುಗೇಟು ನೀಡುವ ಕೆಲಸ ಮಾಡಬೇಕು’ ಎಂದು ಅವರು ಸಲಹೆ ನೀಡಿದರು.