ಸಾಲದು ಎಂಬಂತೆ ಒಂದು ವಾರದಿಂದ ಸುರಿಯುತ್ತಿರುವ ಮಳೆಯ ನೀರು ಶಾಲೆಯ ಅಂಗಳದಲ್ಲಿ ಸಂಗ್ರಹವಾಗಿದ್ದು, ಆವರಣ ಕೆರೆಯಂತಾಗಿದೆ.ಇಲ್ಲಿ ಸಂಗ್ರಹವಾದ ಮಳೆ ನೀರು ಹೊರಗೆ ಹೋಗಲು ಚರಂಡಿ ವ್ಯವಸ್ಥೆ ಇಲ್ಲ. ಈ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು, ಈ ಭಾಗದ ಪಂಚಾಯ್ತಿ ಸದಸ್ಯರು, ತಾಲ್ಲೂಕು ಪಂಚಾಯ್ತಿ ಸದಸ್ಯರಿಗೆ ಮನವಿ ಮಾಡಿದ್ದೆವು. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಮುಖ್ಯಶಿಕ್ಷಕ ರುದ್ರಯ್ಯ.