ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಆವರಣದಲ್ಲಿ ಭಜನೆ ಮಾಡಿದ ಬಿಜೆಪಿ ಸದಸ್ಯರು

Last Updated 7 ಅಕ್ಟೋಬರ್ 2017, 8:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಾಲಿಕೆಯ ನಿವೃತ್ತ ನೌಕರರಿಗೆ ಬರಬೇಕಿರುವ ಪಿಂಚಣಿ ಮೊತ್ತವನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದ ಸಚಿವ ವಿನಯ ಕುಲಕರ್ಣಿ ಮಾತು ತಪ್ಪಿದ್ದಾರೆ ಎಂದು ಆರೋಪಿಸಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಭಜನೆ ನಡೆಸಿ ಪ್ರತಿಭಟನೆ ನಡೆಸಿದರು.

ಪಾಲಿಕೆ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಭಜನೆಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸ್ಮಿತಾ ಜಾಧವ, ಮಹೇಶ ಬುರ್ಲಿ, ಶಿವಾನಂದ ಮುತ್ತಣ್ಣವರ, ಮೇನಕಾ ಹುರಳಿ, ಶಿವು ಮೆಣಸಿನಕಾಯಿ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಹಣ ಬಿಡುಗಡೆಯಾಗುವವರೆಗೂ ಧರಣಿ ಮುಂದುವರಿಯಲಿದೆ. ಶನಿವಾರ ಪಾಲಿಕೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಇರುವುದರಿಂದ ಧರಣಿ ಇರುವುದಿಲ್ಲ ಎಂದು ಮುತ್ತಣ್ಣವರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT