ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪಟ್ಟಣದಲ್ಲಿ ವೈವಿಧ್ಯಮಯ ರೀತಿಯಲ್ಲಿ ನಡೆಯುವ ಸಾಂಸ್ಕೃತಿಕ ಪರಂಪರೆಯಲ್ಲಿ ವಿಜಯ ದುರ್ಗಾದೇವಿಯ ದೇವಸ್ಥಾನ ಸಮಿತಿಯವರು ಹಮ್ಮಿಕೊಳ್ಳುವ ದಸರಾ ಆಚರಣೆ ಮಾದರಿಯಾಗಿದೆ ಎಂದರು. ಗಣ್ಯರಾದ ಬಸವರಾಜ ಉಳ್ಳಾಗಡ್ಡಿ, ಬಸಪ್ಪ ಕಮ್ಮಾರ, ಸಂಗಪ್ಪ ಕೊಪ್ಪಳ ಇದ್ದರು.