ಮಂಡ್ಯ: ಶುಕ್ರವಾರ ಸಂಜೆ ಆರಂಭವಾದ ಮಳೆ ಗುಡುಗು, ಸಿಡಿಲು ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಧಾರಾಕಾರ ಮಳೆಯಿಂದಾಗಿ ರಸ್ತೆಗಳು, ಚರಂಡಿಗಳು ತುಂಬಿ ಹರಿದವು. ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ನೀರು ನಿಂತ ಪರಿಣಾಮ ಕೆರೆಯಂತಾಗಿತ್ತು ನಗರದ ಪ್ರಮುಖ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನೀರು ತುಂಬಿ ಹರಿಯಿತು.