ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳ ತತ್ವ, ಸಿದ್ಧಾಂತ, ಸಂಹಿತೆ ಉತ್ತಮವಾಗಿದೆ. ಆದರೆ, ಯಾವ ಪಕ್ಷಗಳೂ ಅವುಗಳನ್ನು ಅನುಷ್ಠಾನಗೊಳಿಸಿಲ್ಲ. ಹೊಸ ಪಕ್ಷ ಸಂಹಿತೆಗೆ ಬದ್ಧವಾಗಿರುತ್ತದೆ. ಬಡ ಜನರಿಗೆ, ಸರ್ಕಾರಿ ನೌಕರರಿಗೆ ನೆಮ್ಮದಿ ಜೀವನ ಕಲ್ಪಿಸುವುದೇ ಮುಖ್ಯ ಗುರಿ. ಯಾವುದೇ ರಾಜಕೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸದೇ, ಸರ್ಕಾರಿ ನೌಕರರ ಸುಗಮ ಕಾರ್ಯಕ್ಕೆ ಅಡ್ಡಿಪಡಿಸುವ ಡೋಂಗಿ ರಾಜಕೀಯ ಪಕ್ಷಗಳ ವಿರುದ್ಧ ಮಾತ್ರ ಹೋರಾಟ ನಡೆಸಲಾಗುವುದು ಎಂದರು.