ಚಿರತೆಯನ್ನು ನೋಡಿ ಭಯಭೀತರಾದ ಬಸಣ್ಣ, ತಕ್ಷಣವೇ ಹೊರ ಬಂದು ಪಾಲಿಹೌಸ್ನ ಬಾಗಿಲಿಗೆ ಕಲ್ಲುಗಳನ್ನಿಟ್ಟು ಭದ್ರಪಡಿಸಿ ಕೂಗಿಕೊಂಡರು. ಆಗ ಗ್ರಾಮಸ್ಥರು ಜಮಾಯಿಸಿದರು. ಪಾಲಿ ಹೌಸ್ನಿಂದ ತಪ್ಪಿಸಿಕೊಳ್ಳುಲು ಚಿರತೆ ಹೆಣಗಾಡಿತು. ಪರದೆ ಹರಿದು ಹೊರ ಹೋಗಲು ಯತ್ನಿಸಿದಾಗ ಗ್ರಾಮಸ್ಥರು ಅದರ ತಲೆಭಾಗಕ್ಕೆ ಮಾರಕಾಸ್ತ್ರಗಳಿಂದ ಬಲವಾಗಿ ಹೊಡೆದರು. ಕೆಲಕಾಲ ಒದ್ದಾಡಿದ ಚಿರತೆಯು ಅಲ್ಲಿಯೇ ಮೃತಪಟ್ಟಿತು.