ಓದಿನಲ್ಲಿ ಹಿಂದುಳಿದಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿರುವ ಪತ್ರವೊಂದು ಆತನ ಬಳಿ ಸಿಕ್ಕಿದೆ. ಆದರೆ, ಕೆಲವು ದಿನಗಳಿಂದ ಈ ವಿದ್ಯಾರ್ಥಿ ಪಕ್ಕದ ಕಟ್ಟಡದಲ್ಲಿ ತಾಲೀಮು ನಡೆಸುತ್ತಿರುವುದನ್ನು ನೋಡಿರುವುದಾಗಿ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಬ್ಲೂ ವೇಲ್ ಗೇಮ್ ಆಡುತ್ತಾ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬ ಶಂಕೆಯಿಂದ ಕಂಕನಾಡಿ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.