2017ರ ಜುಲೈ ತಿಂಗಳ ಮೊದಲ ವಾರದಲ್ಲಿ ಮೆಟ್ರೊ ಸಿಬ್ಬಂದಿ ಹಾಗೂ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ನಡುವೆ ಕಲಹ ನಡೆದಿತ್ತು. ಈ ವೇಳೆ ಮೆಟ್ರೊ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ವಿರೋಧಿಸಿ ಮೆಟ್ರೊ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಮೆಟ್ರೊ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ವ್ಯತ್ಯಯ ದೂರ ಮಾಡಲು ಸರ್ಕಾರ ಎಸ್ಮಾ ಜಾರಿ ಮಾಡಿತ್ತು.