ಜುಲೈ 15ರಂದು ರಾತ್ರಿ ಕಾರಾಗೃಹದಲ್ಲಿ 20 ಕೈದಿಗಳ ಮೇಲೆ ಹಲ್ಲೆ ನಡೆಸಿದ್ದ ಬಳಿಕ, ಅವರನ್ನು ಕಲಬುರ್ಗಿ, ಬೆಳಗಾವಿ, ಬಳ್ಳಾರಿ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಸ್ಥಳಾಂತರ ವೇಳೆಯಲ್ಲೂ ಹಲವರು ಕುಂಟುತ್ತ, ನರಳುತ್ತ ವಾಹನ ಹತ್ತಿದ್ದರು. ಈ ಸಂಬಂಧ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಆಧರಿಸಿ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.