ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಗೋಡೆ ಕುಸಿದು ಸಾವು

ಮಲಗಿದ್ದ ಯುವಕನಿಗೆ ಸಿಡಿಲು ಬಡಿದು ಸಾವು
Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಮನೆ ಗೋಡೆ ಕುಸಿದು ಬಿದ್ದು ಮುನಿರತ್ನ (22) ಎಂಬುವವರು ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಗುಂಡಾಪುರದಲ್ಲಿ ಶುಕ್ರವಾರ ತಡರಾತ್ರಿ ಮಲಗಿದ್ದ ವಿಶ್ವನಾಥ ಬಸವರಾಜ ಕುಂಬಾರ (19) ಎಂಬುವವರು ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾರೆ

ರಾಮನಗರ ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಮಳೆ ಸುರಿದಿದ್ದು. ರಾಮನಗರದ ರಂಗರಾಯರದೊಡ್ಡಿ ಕೆರೆಯ ಕೋಡಿ ಬಿದ್ದು ಕೆಳಹಂತದ ರಸ್ತೆ ಕೊಚ್ಚಿಹೋಗಿದೆ.

ಶಿವಮೊಗ್ಗ ಜಿಲ್ಲೆಯ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ.

ಬಾಗಲಕೋಟೆ ಹಾಗೂ ಹುಬ್ಬಳ್ಳಿ ನಗರದ ಕೆಲವು ಕಡೆ ಶನಿವಾರ ಮಧ್ಯಾಹ್ನ ಅರ್ಧ ತಾಸು ಮಳೆಯಾಗಿದೆ.

ಬಳ್ಳಾರಿ ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಸಮೀಪದ ಅಯ್ಯನಹಳ್ಳಿ ಗ್ರಾಮದ ಕೆರೆ ಕೋಡಿ ಬಿದ್ದು ಸುಮಾರು 60 ಎಕರೆ ಬೆಳೆ ಹಾನಿಯಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 11ರ ಸುಮಾರಿಗೆ ಆರಂಭವಾದ ಮಳೆ ಬೆಳಗಿನವರೆಗೂ ಧಾರಾಕಾರ ಸುರಿದಿತು. ರಾಯಚೂರು ಜಿಲ್ಲೆಯಾದ್ಯಂತ ಶನಿವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿದು, ಜನಜೀವನ ಅಸ್ತವ್ಯಸ್ತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT