ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೈ’ ನಾಯಕರಿಗೆ ಬಿಸಿ ಮುಟ್ಟಿಸಲು ವೇಣು ಪ್ರವಾಸ

Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನದ ಪ್ರಗತಿಯನ್ನು ಖುದ್ದು ವೀಕ್ಷಿಸುವ ಮೂಲಕ ಈ ಅಭಿಯಾನದಲ್ಲಿ ಕೈ ಜೋಡಿಸದ ಶಾಸಕರು ಮತ್ತು ಪಕ್ಷದ ಮುಖಂಡರಿಗೆ ಬಿಸಿ ಮುಟ್ಟಿಸಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನಿರ್ಧರಿಸಿದ್ದಾರೆ.

ಇದೇ 15ರಿಂದ ಮೂರು ದಿನ ಮತ್ತೆ ರಾಜ್ಯ ಪ್ರವಾಸ ಕೈಕೊಳ್ಳಲಿರುವ ಅವರು, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹುಬ್ಬಳ್ಳಿ–ಧಾರವಾಡದಲ್ಲಿ ಸುತ್ತಾಡಲಿದ್ದಾರೆ. ಈ ಜಿಲ್ಲೆಗಳ ಎಲ್ಲ ತಾಲ್ಲೂಕುಗಳಿಗೆ ಅವರು ಭೇಟಿ ನೀಡಲು ಉದ್ದೇಶಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತಳಮಟ್ಟದಲ್ಲಿ ಪಕ್ಷ ಸಂಘಟಿಸಲು ಕೈಗೊಂಡಿರುವ ಮನೆ ಮನೆಗೆ ಅಭಿಯಾನ ಯಶಸ್ವಿಯಾಗದ ಬಗ್ಗೆ ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆ ಮತ್ತು ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ವೇಣುಗೋಪಾಲ್‌ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಶಾಸಕರು ಮತ್ತು ಪಕ್ಷದ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದ ಅವರು, ವಾರದೊಳಗೆ ವರದಿ ನೀಡುವಂತೆಯೂ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT