ಬೆಂಗಳೂರು: ‘ಕೆ.ತಿಮ್ಮಪ್ಪಯ್ಯ, ಶಫಿ ದಾರಾಷಾ ಸೇರಿದಂತೆ ಹಲವು ಟೂರ್ನಿಗಳಲ್ಲಿ ಶ್ರೇಷ್ಠ ಆಟ ಆಡಿದ್ದೆ. ಹೀಗಾಗಿ ರಣಜಿ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸ ಇತ್ತು. ಈ ಬಾರಿ ಸ್ಥಾನ ಸಿಕ್ಕಿರುವುದರಿಂದ ತುಂಬಾ ಖುಷಿಯಾಗಿದೆ. ಸಿಕ್ಕ ಅವಕಾಶದಲ್ಲಿ ಉತ್ತಮ ಆಟ ಆಡಿ ತಂಡದ ಗೆಲುವಿಗಾಗಿ ಪ್ರಯತ್ನಿಸುತ್ತೇನೆ’ ಎಂದು ಅಭಿಷೇಕ್ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.