ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಕಟ್ಟಿ ವಚನ ಸಂಗ್ರಹ ಒರೆಗೆ ಹಚ್ಚಲು ವಿರೋಧ

Last Updated 8 ಅಕ್ಟೋಬರ್ 2017, 5:30 IST
ಅಕ್ಷರ ಗಾತ್ರ

ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ): ‘ವಚನ ಪಿತಾಮಹ ಫ.ಗು. ಹಳಕಟ್ಟಿ ಸಂಗ್ರಹಿಸಿರುವ ವಚನಗಳನ್ನು ಒರೆಗೆ ಹಚ್ಚುವ ಅವಶ್ಯಕತೆ ಇದೆ’ ಎಂದು ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭೆಯಲ್ಲಿ ಹೊರಹೊಮ್ಮಿದ ಅಭಿಪ್ರಾಯಕ್ಕೆ ಲಿಂಗಾಯತ ಧರ್ಮ ಮಹಾಸಭೆಯ ಸಂಸ್ಥಾಪಕ ಗೌರವಾಧ್ಯಕ್ಷೆ ಮಾತೆ ಮಹಾದೇವಿ ಹಾಗೂ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ಕೂಡಲಸಂಗಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾತೆ ಮಹಾದೇವಿ, ‘ಬಹಿರಂಗ ಸಭೆಯಲ್ಲಿ ಒಂದು, ಗೋಪ್ಯ ಸಭೆಗಳಲ್ಲಿ ಮತ್ತೊಂದು ನಿಲುವು ವ್ಯಕ್ತಪಡಿಸುತ್ತಿರುವ ಮಹಾಸಭೆಯನ್ನು ಬಸವತತ್ವ ನಿಷ್ಠರು ಬಹಿಷ್ಕರಿಸಿ, ಮಹಾಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ. ‘ಹಳಕಟ್ಟಿ ಅವರು ವಚನಗಳನ್ನು ಸಂಗ್ರಹಿಸಲು ಸಾಕಷ್ಟು ಶ್ರಮ ಹಾಕಿದ್ದಾರೆ. ಆದರೂ ಅವರ ಶ್ರಮವನ್ನು ಅಗೌರವದಿಂದ ಕಾಣುವುದು ಸರಿಯಲ್ಲ ಎಂದರು.

ಶರಣರಿಗೆ ಅವಮಾನ: ಹಳಕಟ್ಟಿಯವರ ಸಂಶೋಧನೆಯನ್ನು ಸುಳ್ಳು ಎಂದು ಸೃಷ್ಟಿಸಲು ಅವರು ಸಂಪಾದಿಸಿದ ವಚನಗಳನ್ನು ತಿರುಚುವ ಕೃತ್ಯಕ್ಕೆ ವೀರಶೈವ ಮಹಾಸಭೆ ಕೈಹಾಕಿದೆ ಎಂದು ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT