ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನವರಿಯಿಂದ ಅಕ್ಟೋಬರ್ 7ರವರೆಗೆ ಜಿಲ್ಲೆಯಾದ್ಯಂತ 455 ಮಿ.ಮೀಯಷ್ಟು ಮಳೆಯಾಗಿದೆ. ಮುಂಡರಗಿ ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಒಟ್ಟಾರೆ ಶೇ 15ರಷ್ಟು ಮಳೆ ಕೊರತೆಯಾಗಿದೆ. ಗದಗ ಮತ್ತು ರೋಣ ತಾಲ್ಲೂಕುಗಳಲ್ಲಿ ತಲಾ 2, ನರಗುಂದದಲ್ಲಿ 1 ಹಾಗೂ ಶಿರಹಟ್ಟಿಯಲ್ಲಿ 4 ಜೀವ ಹಾನಿ ಪ್ರಕರಣ ವರದಿಯಾಗಿದ್ದು, ತಲಾ ₹ 4 ಲಕ್ಷ ಪರಿಹಾರ ವಿತರಿಸಲಾಗಿದೆ’ ಎಂದರು.