ಈ ಸೇತುವೆ ಇಬ್ಬಡಿ, ಅಜ್ಜೂರಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಬಿರುಕು ಕಾಣಿಸಿಕೊಂಡು ಕುಸಿದು ಬೀಳುವ ಹಂತಕ್ಕೆ ತಲುಪಿದೆ. ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ.
‘ಹೇಮಾವತಿ ಜಲಾಶಯ ಯೋಜನೆ ಎಂಜಿನಿಯರ್ ನಿರ್ಲಕ್ಷ್ಯದಿಂದಾಗಿ ಕೆಲ ತಿಂಗಳ ಹಿಂದಷ್ಟೇ ನಿರ್ಮಿಸಿದ್ದ ಈ ಸೇತುವೆ ಕಳಪೆಯಾಗಿದ್ದು, ಈ ಮಳೆಗೆ ಒಡೆದು ಹೋಗಿದೆ. ಎಂಜಿನಿಯರ್ ತುರ್ತು ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ತಾ.ಪಂ ಸದಸ್ಯ ನಿಂಗೇಗೌಡ, ಯಲಗತವಳ್ಳಿ ಗ್ರಾ.ಪಂ. ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಸಿದರು.