‘ಅಕ್ರಮದ ಕುರಿತು ಆರಂಭದಲ್ಲಿ ಸಿದ್ದರಾಮಯ್ಯ, ಜಗದೀಶ ಶೆಟ್ಟರ್, ಕಾಗೋಡು ತಿಮ್ಮಪ್ಪ ವೀರಾವೇಶದಿಂದ ಮಾತನಾಡಿದರು. ಸದನ ಸಮಿತಿ ವರದಿ ನೀಡಿ ವರ್ಷ ಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ಪ್ರಧಾನಿ ಮೋದಿ ಅವರನ್ನು ಖುದ್ದು ಭೇಟಿ ಮಾಡಿ ಮನವರಿಕೆ ಮಾಡಿದರೂ ಕ್ರಮ ಕೈಗೊಂಡಿಲ್ಲ. ಶಾಸಕರಿಗೆ ಸದನದಲ್ಲಿ ಪ್ರಶ್ನಿಸುವ ಆತ್ಮಸ್ಥೈರ್ಯವೂ ಇಲ್ಲ. ರೈತರ ಪರವಾಗಿ ಮತ್ತೊಮ್ಮೆ ಏಕಾಂಗಿಯಾಗಿ ಹೋರಾಟ ಮಾಡಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.