ಅ.2ರಂದು ಶಿವಕುಮಾರ್ ಹಾಗೂ ಚೇತನ್ ಅವರು ಪ್ರವೀಣ ಮತ್ತು ವಿನಾಯಕ್ ಎಂಬುವರನ್ನು ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಇಲ್ಲಿನ ಆಳಂದ ರಸ್ತೆಯ ಡಬರಾಬಾದ್ ಬಳಿ ಅವರಿಬ್ಬರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.