ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ – ಲಿಂಗಾಯತ ಹೇಳಿಕೆ ನೀಡಿಲ್ಲ: ಸ್ವಾಮೀಜಿ ಸ್ಪಷ್ಟನೆ

Last Updated 8 ಅಕ್ಟೋಬರ್ 2017, 9:04 IST
ಅಕ್ಷರ ಗಾತ್ರ

ಕೊಪ್ಪಳ: ಗಂಗಾವತಿಯಲ್ಲಿ ತಾವು ವೀರಶೈವ–ಲಿಂಗಾಯತ ವಿಷಯದ ಕುರಿತು ಯಾವುದೇ ಹೇಳಿಕೆ ನೀಡಿಲ್ಲ ಎಂದು ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಧಾರವಾಡದ ಮುರುಘಾ ಮಠದ ವಸತಿ ನಿಲಯದ ಶತಮಾನೋತ್ಸವಕ್ಕೆ ಆಹ್ವಾನಿಸಲು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ಶತಮಾನೋತ್ಸವ ಸಮಾ ರಂಭದ ಕುರಿತು ಚರ್ಚಿಸಿ ದ್ದೇವೆಯೇ ವಿನಃ ಬೇರೇನನ್ನೂ ಮಾತನಾಡಿಲ್ಲ.

ಈ ಕುರಿತ ವರದಿ ಸತ್ಯಕ್ಕೆ ದೂರವಾದದ್ದು ಎಂದು ಅವರು ಹೇಳಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ನಮ್ಮ ಬದ್ಧತೆ ಇದೆ. ಅದಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು. ವೀರಶೈವ ಪದವನ್ನು ಬಳಸಬಾರದು.

ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಆಗ್ರಹಿಸಿ ಹೋರಾಟಕ್ಕೆ ಬಂದಿರುವ ರಾಜಕಾರಣಿಗಳೂ ಸ್ವಾರ್ಥದಿಂದ ಬಂದಿಲ್ಲ. ಇದು ಪ್ರತ್ಯೇಕ ಧರ್ಮ ಆಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT