‘ಇವರು ಅ. 2ರಂದು ರಾತ್ರಿ ಇಲ್ಲಿನ ಹೀರಾಪುರ ಕ್ರಾಸ್ ಬಳಿ ಬೈಕ್ ಮೇಲೆ ತೆರಳುತ್ತಿದ್ದ ಪ್ರವೀಣ ಹಾಗೂ ವಿನಾಯಕ ಅವರಿಗೆ ಚಾಕುವಿನಿಂದ ಇರಿದು ನಗ–ನಾಣ್ಯ ದೋಚಿದ್ದರು. ಭಾನುವಾರ ದರೋಡೆಗೆ ಹೊಂಚು ಹಾಕಿದ್ದ ಖಚಿತ ಮಾಹಿತಿ ಆಧರಿಸಿ ಇವರನ್ನು ಬಂಧಿಸಲು ತೆರಳಿದ್ದ ರಾಘವೇಂದ್ರ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಅಕ್ಕಮಹಾದೇವಿ ಹಾಗೂ ಅಶೋಕ ನಗರ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಪ್ರಹ್ಲಾದ ಕುಲಕರ್ಣಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದರು. ತಕ್ಷಣ ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.