ತಾಲ್ಲೂಕಿನ ಬದನವಾಳು ಗ್ರಾಮದ ರಾಮಯ್ಯ ಎಂಬುವವರ ಪುತ್ರ ರಮೇಶ್ ಗಾರೆ ಕೆಲಸ ಮಾಡಿಕೊಂಡಿದ್ದರು. ಐದು ವರ್ಷಗಳಿಂದ ಚಾಮಲಾ ಪುರ ಹುಂಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೋರೆಹುಂಡಿಯ ಚಂದ್ರಶೇಖರ್ ಎಂಬುವವರ ಕೊಟ್ಟಿಗೆಯಲ್ಲಿ ರಮೇಶ್ ಅವಿತುಕೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು, ಅವರನ್ನು ಹಿಡಿದು ಪ್ರಶ್ನಿಸಿದ್ದರು ಎಂದು ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.