ವಿಜಯಪುರ: ಬಯಲು ಸೀಮೆ ಜನತೆಯ ಪಾಲಿಗೆ ಮಳೆ ವರವಾಗಿ ಬಂದರೂ ಚರಂಡಿಗಳ ಅವ್ಯವಸ್ಥೆಯಿಂದಾಗಿ ನೀರು ಮನೆಗಳಿಗೆ ನುಗ್ಗಿದೆ. ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬಿದಲಪುರ ಗ್ರಾಮದಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ಇರುವ ಕಾರಣ, ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದರಿಂದ ಜನರು ಪರದಾಡುವಂತಾಗಿತ್ತು.