‘ಪರವಾನಿಗೆಗಿಂತ ಹೆಚ್ಚುವರಿ ಪ್ರಮಾಣದ ಮರಳು ಅಕ್ರಮ ಸಾಗಣೆಗೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳ ಪರೋಕ್ಷ ಬೆಂಬಲ ಇರುವುದು ದೃಢಪಟ್ಟಿದೆ. ಅಕ್ರಮ ದಂಧೆಗೆ ಸಹಕರಿಸಿದ ಅಧಿಕಾರಿಗಳ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ ಆಗ್ರಹಪಡಿಸಿದ್ದಾರೆ.