"ಕುಲಪತಿಯಾಗಿದ್ದ ಅವಧಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದರು’ ಎನ್ನಲಾದ ಆರೋಪ ಎಚ್. ಮಹೇಶಪ್ಪ ಅವರ ಮೇಲೆ ಬಂದಿತ್ತು. ಈ ಕುರಿತು ರಾಜ್ಯಪಾಲ ವಜುಭಾಯಿ ವಾಲಾ, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಕೇಶವನಾರಾಯಣ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚಿಸಿದ್ದರು. ಸಮಿತಿ ನೀಡಿದ ವರದಿಯಲ್ಲಿ ಮಹೇಶಪ್ಪ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಹೀಗಾಗಿ, ಅವರನ್ನು ಕುಲಪತಿ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.