ಐದು ದಿನ ನಡೆಯುವ ಈ ಸಮ್ಮೇಳನದಲ್ಲಿ ದೇಶ ವಿದೇಶಗಳ ಸಂಶೋಧಕರು, ವಿಜ್ಞಾನಿಗಳು ಪಾಲ್ಗೊಳ್ಳಲಿದ್ದಾರೆ. ಕೃಷಿ, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರಗಳಿಗೆ ಸಲಹೆ ನೀಡುತ್ತಾರೆ ಎಂದು ಭಾರತೀಯ ವಿಜ್ಞಾನ ಸಮ್ಮೇಳ ಸಂಘಟನೆ (ಐಎಸ್ಸಿಎ) ಅಧ್ಯಕ್ಷ ಡಾ. ಮನೋಜ್ ಕುಮಾರ್ ಚಕ್ರವರ್ತಿ ತಿಳಿಸಿದ್ದಾರೆ.