ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ, ಶಾಸಕರಾದ ಆರ್. ಅಶೋಕ್, ಸಿ.ಟಿ. ರವಿ, ಬಿ.ಎನ್. ವಿಜಯಕುಮಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಲಾಲ್ ಬಾಗ್ನಿಂದ ಪಾದಯಾತ್ರೆ ಆರಂಭಿಸಿದರು. ಬಸವನಗುಡಿಯ ಸಿಪಿಐ(ಎಂ) ಕಚೇರಿ ‘ಜ್ಯೋತಿಬಸು ಭವನ’ಕ್ಕೆ ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಆಶ್ರಮ ವೃತ್ತದಲ್ಲೇ ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.