ವಿಧಾನಸೌಧದ ವಜ್ರಮಹೋತ್ಸವ ಕಾರ್ಯಕ್ರಮವನ್ನು ಈ ತಿಂಗಳೇ ಆಯೋಜಿಸಲು ನಿರ್ಧರಿಸಲಾಗಿದೆ. ಈ ವೇಳೆ ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಭಾಗಿಯಾಗುವಂತೆ ರಾಷ್ಟ್ರಪತಿಯವರಿಗೆ ಮನವಿ ಮಾಡಲಾಯಿತು. ರಾಜ್ಯ ಸರ್ಕಾರದ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಷ್ಟ್ರಪತಿಯವರು ಇದೇ 25ರಂದು ಜಂಟಿ ಅಧಿವೇಶನ ಆಯೋಜಿಸುವಂತೆ ಸಲಹೆ ನೀಡಿದ್ದು, ಭಾಗಿಯಾಗುವ ಭರವಸೆ ನೀಡಿದ್ದಾರೆ ಎಂದು ಕೆ.ಬಿ ಕೋಳಿವಾಡ ಸುದ್ದಿಗಾರರಿಗೆ ತಿಳಿಸಿದರು.