ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೆಂಗಳೂರು, ಹಾವೇರಿ, ಗದಗ ಜಿಲ್ಲೆಗಳಿಂದ ಪಿಎಸಿಎಲ್ನಲ್ಲಿ ಹಣ ಹೂಡಿಕೆ ಮಾಡಿದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೆಲವರು ಅರೆಬೆತ್ತಲೆ ಮೆರವಣಿಗೆ ನಡೆಸಿ ಭಿಕ್ಷಾಟನೆಯನ್ನೂ ಮಾಡಿದರು.