ತಾಲ್ಲೂಕಿನಲ್ಲಿ ಸುಮಾರು 10 ಸಾವಿರ ಹೆಕ್ಟೇರ್ನಲ್ಲಿ ರೈತರು ಹತ್ತಿ ನಾಟಿ ಮಾಡಿದ್ದಾರೆ. ಹತ್ತಿ ಬೆಳೆಗೆ ತಾಮ್ರ ರೋಗ ಕಾಣಿಸಿಕೊಂಡಿದ್ದರಿಂದ ಅದು ಬೆಳವಣಿಗೆಯಾಗದೇ ಇಳುವರಿ ಕಡಿಮೆಯಾಗುತ್ತಿದೆ. ಇನ್ನೊಂದು ಕಡೆ ಒಡೆದಿರುವ ಹತ್ತಿಯನ್ನು ಬಿಡಿಸಲು ಮಳೆ ಬಿಡುತ್ತಿಲ್ಲ. ಜತೆಗೆ, ಕೃಷಿ ಕಾರ್ಮಿಕರ ಸಮಸ್ಯೆ ಕಾಡುತ್ತಿದೆ. ಹೀಗಾಗಿ, ರೈತರು ಒಡೆದಿರುವ ಹತ್ತಿ ನೋಡಿ ಮರುಗುವಂತಾಗಿದೆ.