ಪತ್ರದಲ್ಲಿ ಏನಿದೆ: ಎಂ.ಡಿ.ರಮೇಶ್ಗೌಡ ಜೆಡಿಎಸ್ ಪಕ್ಷದಿಂದ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ, ಕೊನೆಗೆ ಅಧ್ಯಕ್ಷರಾಗಿಯೂ ಪಕ್ಷದಿಂದ ಎಲ್ಲ ಅನುಕೂಲಗಳನ್ನು ಪಡೆದುಕೊಂಡು ಇತ್ತೀಚಿನ ದಿನಗಳಲ್ಲಿ ತಾಲ್ಲೂಕು ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸಿ ಹಲವಾರು ಕಾರ್ಯಕ್ರಮಗಳ ಭಾಷಣಗಳಲ್ಲಿ ಸ್ಥಳೀಯ ಶಾಸಕ ಎಂ.ಟಿ.ಕೃಷ್ಣಪ್ಪನವರ ಬಗ್ಗೆ ‘ಭ್ರಷ್ಟ ಶಾಸಕರು ಇವರಿಗೆ ಮುಂದಿನ ದಿನಗಳಲ್ಲಿ ಮತ ನೀಡ ಬೇಡಿ’ ಎನ್ನುತ್ತಾ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೋಡಗಿದ್ದೀರಿ. ಅಲ್ಲದೆ ಕಳೆದ ಎಪಿಎಂಸಿ ಚುನಾವಣೆಯಲ್ಲಿ ತಾಳಕೆರೆ ಕ್ಷೇತ್ರದ ಬಂಡಾಯ ಅಭ್ಯರ್ಥಿಗೆ ನೇರ ಸಹಕಾರ ನೀಡುವುದರೊಂದಿಗೆ ನಮ್ಮ ಜೆಡಿಎಸ್ ಪಕ್ಷದ ಸೋಲಿಗೆ ಕಾರಣರಾಗಿದ್ದೀರಿ, ಇದರಿಂದ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಗೆ ಹಾನಿಯಾಗಿರುವ ಪ್ರಯುಕ್ತ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದಿದೆ.