ಬೆಂಗಳೂರಿನ ಆರ್.ಟಿ.ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ನೂರ್ ಅಹಮದ್ (22), ಮುದಾಸೀರ್ (23), ಕಾಲು (23) ಅಪಹರಣಕ್ಕೆ ಒಳಗಾದವರು. ಈ ಪೈಕಿ ಹಲ್ಲೆ ವೇಳೆ ನೂರ್ ಅಹಮದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮುದಾಸೀರ್, ಕಾಲು ಸ್ಥಿತಿ ಚಿಂತಾಜನಕವಾಗಿದ್ದು ಇಬ್ಬರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.