ನವದೆಹಲಿ: ರೈಲು ನಿಲ್ದಾಣಗಳ ಬಳಿಯ ಹೋಟೆಲ್ಗಳ ಹರಾಜು ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಅವರ ಪುತ್ರ ತೇಜಸ್ವಿ ಯಾದವ್ ಅವರು ಜಾರಿ ನಿರ್ದೇಶನಾಲಯದ ಮುಂದೆ ಮಂಗಳವಾರ ಹಾಜರಾದರು.
ಬಿಹಾರದ ಮಾಜಿ ಉಪಮುಖ್ಯಮಂತ್ರಿಯೂ ಆದ ತೇಜಸ್ವಿ ಅವರು ನವದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ಬಂದು ತಮ್ಮ ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯವು ಲಾಲು ಕುಟುಂಬದವರ ಮೇಲೆ ದೂರು ದಾಖಲಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಸಿ ಗುಪ್ತ ಅವರನ್ನು ಈಗಾಗಲೇ ವಿಚಾರಣೆ ನಡೆಸಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಅವರಿಗೂ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಹ ದೂರು ದಾಖಲಿಸಿದೆ.