ಜಗನ್ ಟೀಕೆಗೆ ಇದೇ ವೇಳೆ ಅಮರಾವತಿಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ‘ರಾಜ್ಯ ಸರ್ಕಾರವನ್ನು ದೂರುವ ಮೊದಲು ವಿರೋಧ ಪಕ್ಷದ ನಾಯಕರು ತಮ್ಮ ಸಂಸದರಿಗೆ ರಾಜೀನಾಮೆ ನೀಡಲು ಹೇಳಬೇಕು. ಅಕ್ರಮ ಆಸ್ತಿ ಪ್ರಕರಣದಲ್ಲಿ ತಮ್ಮ ಬಂಧನ ಸಮೀಪಿಸುತ್ತಿದೆ ಎಂದು ಭೀತಿಗೊಂಡಿದ್ದಾರೆ’ ಎಂದು ಹೇಳಿದ್ದಾರೆ.