‘ಎಸ್ಟಿಆರ್ಆರ್ ಯೋಜನೆ ಅಡಿ ನಗರದ ಕೇಂದ್ರ ಭಾಗದಿಂದ 30 ಕಿ.ಮೀ ಅಂತರದಲ್ಲಿ ಇನ್ನೊಂದು ವರ್ತುಲ ರಸ್ತೆ ನಿರ್ಮಾಣವಾಗಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಈ ಯೋಜನೆ ನೆರವಾಗಲಿದೆ. ಹೊಸಕೋಟೆ, ಹಾರೊಹಳ್ಳಿ, ತಾವರೆಕೆರೆ ಹಾಗೂ ನೆಲಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಗುರುತಿಸಿ ದಶಕಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿತ್ತು. ಈಗಾಗಲೇ ಗುರುತಿಸಿರುವ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಬಿಎಂಆರ್ಡಿಎ ಶೀಘ್ರವೇ ಡಿಪಿಆರ್ ಸಿದ್ಧಪಡಿಸಲಿದೆ’ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.