‘ಮುಂಬೈನ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (ಐಬಿಪಿಎಸ್) ನಡೆಸಿದ ಪರೀಕ್ಷೆಯಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಬೇರೆ ರಾಜ್ಯಗಳಲ್ಲಿ ಶೇ 85ರಿಂದ 100ರಷ್ಟು ಸ್ಥಳೀಯ ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಹೊರ ರಾಜ್ಯದವರಿಗೆ ಶೇ 80ರಷ್ಟು ಅವಕಾಶ ಮಾಡಿಕೊಡಲಾಗಿದೆ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.