ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಕೋಡಿ ಒಡೆದು ಹಾನಿ: ಮೈಸೂರು–ಬೆಂಗಳೂರು ಸಂಚಾರಕ್ಕೆ ಅಡ್ಡಿ

Last Updated 11 ಅಕ್ಟೋಬರ್ 2017, 5:13 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಭಾರಿ ಮಳೆಯಾಗಿದೆ. ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಸಮೀಪ ಗಾಣಾಳುದೊಡ್ಡಿ ಕೆರೆಯ ಕೋಡಿ ಒಡೆದು ನೀರು ರಸ್ತೆಗೆ ನುಗ್ಗಿದೆ.

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಈ ಮಾರ್ಗವಾಗಿ ಮೈಸೂರು–ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರು ಪರದಾಡುವಂತೆ ಆಗಿದೆ. ಕನಕಪುರ ತಾಲ್ಲೂಕಿನಲ್ಲಿ ಗರಿಷ್ಠ 174 ಮಿ.ಮೀ ನಷ್ಟು ಮಳೆ ಸುರಿದಿದೆ.

ತಾಲ್ಲೂಕಿನ ಕಂಚುಗಾರನಹಳ್ಳಿಯಲ್ಲಿ 124 ಮಿ.ಮೀ ಹಾಗೂ ಟಿ. ಹೊಸಹಳ್ಳಿ ವ್ಯಾಪ್ತಿಯಲ್ಲಿ 128 ಮಿ.ಮೀ ಮಳೆ ದಾಖಲಾಗಿದೆ.

ರಾಮನಗರ, ಮಾಗಡಿ ಹಾಗೂ ಚನ್ನಪಟ್ಟಣ ತಾಲ್ಲೂಕುಗಳಲ್ಲಿಯೂ ಭಾರಿ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT